ಬಂಟರ ಯಾನೆ ನಾಡವರ ಮಾತೃ ಸಂಘದ ಸಭಾಂಗಣದಲ್ಲಿ ವಿಶ್ವ ಬಂಟರ ಸಮ್ಮೇಳನ-2023* ಆಮಂತ್ರಣ ಪತ್ರಿಕೆ ಲೋಕಾರ್ಪಣೆ
ಮoಗಳೂರು :ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ಮoಗಳೂರು ಇದರ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ *ವಿಶ್ವ ಬಂಟರ ಸಮ್ಮೇಳನ-2023* ರ ಪ್ರಯುಕ್ತ ಉಡುಪಿ ಅಜ್ಜರಕಾಡು ಮೈದಾನದಲ್ಲಿ 28.10.2023ರಂದು ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ "ವಿಶ್ವ ಬಂಟರ ಕ್ರೀಡಾಕೂಟ" ಹಾಗೂ 29.10.2023 ರಂದು ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ "ವಿಶ್ವ ಬಂಟರ ಸಾಂಸ್ಕೃತಿಕ ವೈಭವ"* ಕಾರ್ಯಕ್ರಮದ *ಸ್ಟಿಕರ್ (ಬಿಲ್ಲೆ )ರನ್ನು ದಿನಾಂಕ 22/09/2023ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಸಭಾಂಗಣದಲ್ಲಿ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿಯವರಿಂದ ಅನಾವರಣಗೊಳಿಸಲಾಯಿತು.
ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರು ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ,ಜೊತೆ ಕಾರ್ಯದರ್ಶಿ ಹಾಗೂ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಚಂದ್ರಹಾಸ್ ಡಿ ಶೆಟ್ಟಿ, ಸುಧಾಕರ್ ಪೂಂಜ ಸುರತ್ಕಲ್, ವಸಂತ್ ಶೆಟ್ಟಿ, ರತ್ನಾಕರ್ ಶೆಟ್ಟಿ ಎಕ್ಕಾರ್ , ಡಾ. ಆಶಾ ಜ್ಯೋತಿ ರೈ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು
Post a Comment