ಕೊಪ್ಪಳದ ಗಂಗಾವತಿಯಲ್ಲಿ ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ, ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್‌.


ಕೊಪ್ಪಳದ ಗಂಗಾವತಿಯಲ್ಲಿ ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ, ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್‌.
 

ಕೊಪ್ಪಳ, (ಅಕ್ಟೋಬರ್ 06): ಗಣೇಶ ವಿಸರ್ಜನೆ ವೇಳೆ ನಗರದ ಜಾಮೀಯ ಮಸೀದಿ ಮುಂದೆ ಪೂಜೆ ಸಲ್ಲಿಸುತ್ತಿರುವುದನ್ನು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆಂಬ ಕಾರಣಕ್ಕೆ ಗಂಗಾವತಿ ನಗರ ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಮುಖ್ಯ ಪೇದೆಯೊಬ್ಬರನ್ನು ಅಮಾನತು ಮಾಡಲಾಗಿದೆ. ಗಂಗಾವತಿ ನಗರ ಠಾಣೆ ಇನ್ಸ್​ಪೆಕ್ಟರ್ ಅಡಿವೇಶ ಗುದಿಗೊಪ್ಪ, ಪಿಎಸ್​ಐ ಕಾಮಣ್ಣ ಹಾಗೂ ಹೆಡ್ ಕಾನ್ಸಟೇಬಲ್ ಮರಿಯಪ್ಪ ಹೊಸಮನಿ ಅವರನ್ನು ಸಸ್ಪೆಂಡ್ ಮಾಡಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅದೇಶ‌ ಹೊರಡಿಸಿದ್ದಾರೆ. ಅಕ್ಟೋಬರ್.3 ರಂದು ಗಂಗಾವತಿಯಲ್ಲಿ ನಡೆದ ಗಣೇಶ ವಿಸರ್ಜನೆ ವೇಳೆ‌ ಕರ್ತವ್ಯ ಲೋಪ ಆರೋಪದ ಮೇಲೆ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಕಾರಣ ನೀಡಿದ್ದಾರೆ.


ಕಳೆದ 3 ದಿನಗಳ ಹಿಂದೆ  ಗಣೇಶ ವಿಸರ್ಜನೆ ಸಂದರ್ಭದಲ್ಲಿ ಜಾಮೀಯ ಮಸೀದಿ ಮಂದೆ ಗಣೇಶ ವಾಹನ ನಲ್ಲಿಸಿ ಕುಂಬಳಿಕಾಯಿ ಒಡೆದು ಪೂಜೆ ಸಲ್ಲಿಸಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪಿಎಸ್ಐ ಕಾಮಣ್ಣ ಮತ್ತು ಮುಖ್ಯ ಪೇದೆ ಮರಿಯಪ್ಪ ಅವರು ಇದನ್ನು ತಡೆದಿಲ್ಲ. ಸೂಕ್ಷ್ಮ ಪ್ರದೇಶವಿದ್ದರೂ ಮಸೀದಿ ಮುಂದೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ಲ. ಆ ಕಾರಣಕ್ಕಾಗಿ ಪ್ರಕ್ಷುಬ್ಧ ವಾತವರಣ ನಿರ್ಮಾಣವಾಗಿತ್ತು. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದೆ ಇರುವುದಕ್ಕೆ ಕರ್ತವ್ಯದಲ್ಲಿದ್ದ ಮೂವರ ಪೊಲೀಸ್ ಸಿಬ್ಬಂದಿ ವಿರುದ್ಧ ಎಸ್ಪಿ ಕ್ರಮಕೈಗೊಂಡಿದ್ದಾರೆ.

No comments

Powered by Blogger.