ಶಿವಮೊಗ್ಗದಲ್ಲಿ ಈದ್​ ಮಿಲಾದ್​ ಗಲಾಟೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹ ಹರಡುವವರ ವಿರುದ್ಧ ಕಠಿಣ ಕ್ರಮ;


ಶಿವಮೊಗ್ಗದಲ್ಲಿ ಈದ್​ ಮಿಲಾದ್​ ಗಲಾಟೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹ ಹರಡುವವರ ವಿರುದ್ಧ ಕಠಿಣ ಕ್ರಮ; 

ಶಿವಮೊಗ್ಗ, ಅ.03: ಈದ್​-ಮಿಲಾದ್ ಹಬ್ಬದಲ್ಲಿ ಆದ ಗಲಾಟೆಯ ಕುರಿತು ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಊಹಾಪೋಹಗಳು ಹಬ್ಬುತ್ತಿವೆ. ಬೇರೆ ಬೇರೆ ರಾಜ್ಯದ ವೀಡಿಯೋಗಳನ್ನು ಸಾಮಾಜಿಕ‌ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಈ ರೀತಿ ಊಹಾಪೋಹಗಳನ್ನ ಹರಿಬಿಡುತ್ತಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಜೊತೆಗೆ ಈ ಕುರಿತು ಸಾರ್ವಜನಿಕರು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ ಎಂದು ಶಿವಮೊಗ್ಗ ಎಸ್​ಪಿ.ಮಿಥುನ್ ಕುಮಾರ ಹೇಳಿದರು.


ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹ ಹರಡುವವರ  ವಿರುದ್ಧ ಕಠಿಣ ಕ್ರಮ
ಹೌದು, ಈದ್​-ಮಿಲಾದ್​ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಶಿವಮೊಗ್ಗ ನಗರದ  ರಾಗಿಗುಡ್ಡ ಶಾಂತಿ ನಗರದಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು. ಈ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ‘ಅಂದಿನ‌ ದಿನ ರಾಗಿಗುಡ್ಡದಲ್ಲಿ ಯಾರೋ ಒಬ್ಬರ ಎನ್ ಕೌಂಟರ್ ಆಗಿದೆ ಎನ್ನುವ ಊಹಾಪೋಹ ಹರಿದಾಡಿದೆ. ಆ ರೀತಿ ಊಹಾಪೋಹಗಳ ಕುರಿತು ಈಗಾಗಲೇ ನಾವು ಸ್ಪಷ್ಟನೆಯನ್ನ ಪಡೆದುಕೊಂಡಿದ್ದೇವೆ. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು ಈಗಾಗಲೇ ಕಲ್ಲು ತೂರಾಟದಿಂದ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

No comments

Powered by Blogger.